ಅಂತೆಕಂತೆ ಪುರಾಣವೆಂದು ಮೂದಲಿಸಬೇಡಿ, ಆ ಪುರಾಣಗಳೇ ಹಿಂದೂಸ್ಥಾನಿಗಳ ನೈಜ ಇತಿಹಾಸ. ಪ್ರತಿವರ್ಷವೂ #ಬಲಿಪಾಡ್ಯಮಿ ದಿನ ಈ ನೈಜ ಇತಿಹಾಸವನ್ನು ತಿಳಿಸುತ್ತಲೇ ಇರುವೆ. ಓದಿದವರು ಇತರರಿಗೆ ಹಂಚಿ. ಓದದೇ ಇರುವವರು ಸಂಪೂರ್ಣ ಓದಿ.
ಮಹಾವಿಷ್ಣು ವಾಮನನಾಗಿ ಬಲಿ ಚಕ್ರವರ್ತಿಯ ತಲೆಮೇಲೆ ಮೂರನೇ ಹೆಜ್ಜೆಯಿಟ್ಟು ಪಾತಾಳಕ್ಕೆ ತಳ್ಳಿದ ಜೊತೆಗೆ ಪಾತಾಳ ಅಂದರೆ ಅದು ಬೇರೆ ಯಾವೊದೊ ಒಂದು ಲೋಕ ! ಎಂದು ತಿಳಿದಿದ್ದರೆ ಅದು ಮಹಾ ತಪ್ಪು.
ಭಾರತೀಯ ಮಹತ್ವದ ಇತಿಹಾಸ ವಿಷಯ ತಿಳಿದು ಹೆಮ್ಮೆಯಿಂದ ಎದೆತಟ್ಟಿ ಹೇಳಿ ನಾವು ಹಿಂದೂಸ್ಥಾನಿಗಳು ಎಂದು. ಸರಿಯನಿಸಿದರೆ ಮತ್ತಷ್ಟು ಜನಕ್ಕೆ ಮಾಹಿತಿ ಹಂಚಿ.
ಪಾತಾಳ ಅಂದರೆ ಈಗಿನ ದಕ್ಷಿಣ ಅಮೆರಿಕದ ಪೆರು ದೇಶ(ಸುತಲ)!!!
ನಾ ವಾಮನಮೂರ್ತಿ ಮತ್ತು ಬಲಿಚಕ್ರವರ್ತಿಯ ಹಿಂದಿನ ಪೂರ್ಣ ಕಥೆಯೇಳಲ್ಲ ಸಂಕ್ಷಿಪ್ತವಾಗಿ ಭಾರತೀಯರು ಹೆಮ್ಮೆ ಪಡುವಂತ ಇತಿಹಾಸ ಹೇಳುವೆ.
#ಬಲಿ_ಚಕ್ರವರ್ತಿಯು ಏಶಿಯಾ, ಯುರೋಪ್ ಹಾಗೂ ಆಫ್ರಿಕಾ ಖಂಡಗಳು ಈತನ ಆಳ್ವಿಕೆಯಲ್ಲಿತ್ತು ಬಲಿ ಉತ್ತಮ ರಾಜನಾಗಿದ್ದರು ದೇವತೆಗಳು ವಿರೋಧಿಯಾಗಿ ಬೆಳೆಯತ್ತಿದ್ದ. ಮುಂದೆ ಇವನಿಂದ ಅಪಾಯ ತಪ್ಪಿದ್ದಲ್ಲ ಎಂದು ತಿಳಿದು ದೇವತೆಗಳ ಮೊರೆಗೆ ಮಹಾವಿಷ್ಣು ವಾಮನವತಾರಿಯಾಗಿ ಮಹಾನ್ ಶಕ್ತಿಶಾಲಿಯಾದ ಮತ್ತು ದಾನಿಯಾದ ರಾಕ್ಷಸ ದೊರೆ ಬಲಿಯಿಂದ ಮೂರು ಹೆಜ್ಜೆಗಳು ಭೂಭಾಗ ದಾನ ಪಡೆದು ಮೂರು ಹೆಜ್ಜೆಗಳಿಗೆ ಈಗಿನ ಏಶಿಯಾ, ಯುರೋಪ್,ಮತ್ತು ಆಫ್ರಿಕಾ ಖಂಡಗಳು ಅಳೆದ. (ಈಗಲೂ ಭಾರತದಲ್ಲಿ ಹೆಜ್ಜೆಗಳನ್ನು ಅಳತೆಯಾಗಿ ಬಳಸುವ ರೂಡಿಯಲ್ಲಿದೆ.) ಈಗೇ ಮೂರು ಹೆಜ್ಜೆಗಳಲ್ಲಿ ದಾನ ನೀಡಿದ ಭೂಭಾಗದಲ್ಲಿ ಬಲಿಚಕ್ರವರ್ತಿ ಗೆ ಇರಲು ಹಕ್ಕಿಲ್ಲದೆ ಇರುವುದರಿಂದ, ಬಲಿಯನ್ನು ದಟ್ಟವಾದ ಕಾಡುಗಳಿಂದ ಕೂಡಿದ ದಕ್ಷಿಣ ಅಮೆರಿಕಕ್ಕೆ ಕಳುಹಿಸಿದ !
ಸಮುದ್ರ ಮಾರ್ಗವಾಗಿ ಬಲಿ ಚಕ್ರವರ್ತಿಯನ್ನು ಕಳಿಸುವಾಗ ಹಾಗೆ ಬರಿಗೈಯಲ್ಲಿ ಕಳಿಸಲಿಲ್ಲ ಅಷ್ಟ ಐಶ್ವರ್ಯಗಳೊಂದಿಗೆ ಮತ್ತೆ ಅಲ್ಲಿ ನೆಲೆಸಲು ಅನುಕೂಲವಾಗಲು ರಾಕ್ಷಸರ ಆರ್ಕಿಟೆಕ್ಚರ್ #ಮಯ ನೊಂದಿಗೆ ಅಸುರರು, ದೈತ್ಯರು,ದಾನವರು, ಕಳುಹಿಸಿ ನಾಗ ಜನಾಂಗ ಮತ್ತು ಸರ್ಪಕುಲದವರ ಅಳಿಯ #ಆಸ್ತಿಕ ಮಹರ್ಷಿಗಳ ಜನಾಂಗವನ್ನು ಈಗಿನ ರಾ ಏಜೆಂಟ್ ಗಳಂತೆ ಬಲಿಯ ಚಲನವಲನಗಳ ಮಾಹಿತಿ ಪಡೆಯಲು ನೇಮಿಸಿ ಮಹಾವಿಷ್ಣು ಕಳುಹಿಸಿದರು.
ಅದು ಭಾರತದ ಪೂರ್ವದಿಂದ ದಕ್ಷಿಣ ಅಮೆರಿಕದ ಈಗಿನ ಪೆರು(ಸುತಲ)ಕ್ಕೆ ಸಮುದ್ರಮಾರ್ಗದಲ್ಲಿ ಕಳುಹಿಸಿದ. ಇದು ಬೇರೆ ದಾರಿಗಳಿಗಿಂತ ದಕ್ಷಿಣ ಅಮೆರಿಕಾಕ್ಕೆ ಹತ್ತಿರದ ದಾರಿ! ಒಮ್ಮೆ ನನ್ನ ಚಿತ್ರಗಳನ್ನು ನೋಡಿ ಅಥವಾ ಅಟ್ಲಾಸ್ ನೋಡಿ.
ನಮಗೆ ಪಾತಾಳ ಅಂದಕ್ಷಣ ನೀರಿನ ಕೆಳಗೆ ಹೋಗಬೇಕು (ಅಂದರೆ ಸಮುದ್ರದಲ್ಲಿ ಪ್ರಯಾಣಿಸಬೇಕು) ಮತ್ತೊಂದು ಪಾತಾಳ ಎಲ್ಲಿದೆ ಅಂದಕ್ಷಣ ಭೂಮಿಯ ಕೆಳಗಿದೆಯೆಂದು ಕಾಲು ಒತ್ತಿ ತೋರಿಸುತ್ತೇವೆ ಅಂದರೆ ಭಾರತದಲ್ಲಿ ಒಂದು ರಂಧ್ರವನ್ನು ಕೊರೆದರೆ ಅದು ದಕ್ಷಿಣ ಅಮೆರಿಕಾಗೆ ತಲುಪುತ್ತದೆ. ಯಾರಾದರೂ ಟ್ರೈ ಮಾಡುವವರು ಮಾಡಿ ಹೇಳಿ. ಸುಳ್ಳಲ್ಲ ಸ್ವಾಮಿ.
ಬಲಿ ಚಕ್ರವರ್ತಿಯ ದಾನಕ್ಕೆ ಮೆಚ್ಚಿ ಮಹಾವಿಷ್ಣುನಲ್ಲಿ ಕೊರಿಕೆಯ ಮೇರೆಗೆ ಬಲೇಂದ್ರನಿಗೆ ಭಾರತವರ್ಷಕ್ಕೆ ವರ್ಷಕೊಮ್ಮೆ ಬೇಟಿ ಕೊಡಲು ಅನುಮತಿಸಿದ. ಇಂದಿಗೂ ಕೇರಳದಲ್ಲಿ ವೈಭವದ ಓಣಂ ಹಬ್ಬವನ್ನು ಹತ್ತುದಿನಗಳ ಕಾಲ ಆಚರಿಸುತ್ತಾರೆ. ಈ ಸಮಯದಲ್ಲಿ ಬಲೀಂದ್ರ ನೌಕೆಯಲ್ಲಿ ಸಮುದ್ರ ಯಾನ ಮಾಇದ ನೆನಪಿಗಾಗಿ ಬೊಟ್ ಸ್ಪರ್ಧೆಗಳನ್ನು ಕಾಣಬಹುದು. ಹಾಗೂ ಹತ್ತುದಿನಗಳು ಬಲಿಯು ಪಾತಾಳದಿಂದ ಅಂದರೆ ದಕ್ಷಿಣ ಅಮೆರಿಕದಿಂದ ಭರತವರ್ಷಕ್ಕೆ ಬಂದು ಇರುವ ಸಂಕೇತವಾಗಿ ಕೇರಳದ ಕೊಚ್ಚಿ ಬಳಿಯಿರುವ ಕಾಕ್ಕನಾಡು ಪ್ರದೇಶದಲ್ಲಿ ಬಲಿಗಾಗಿ ನಿರ್ಮಿಸಿದ ಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರವೇ ಓಣಂ ಉತ್ಸವ ಪ್ರಾರಂಭವಾಗುತ್ತದೆ.
#ಇಲ್ಲಿ_ಗಮನಿಸುವ_ಅಂಶವೇನೆಂದರೆ
೧.ಬಲಿಯ ಆಪ್ತ ಮಯ ಶ್ರೇಷ್ಠ ವಾಸ್ತುಶಿಲ್ಪಿ . #ಮಾಯನ್ಸ್ ನಾಗರಿಕತೆಯು ಇವನ ಹೆಸರಿಂದಲೇ ಬಂದಿದ್ದು. ಮಯ ಅತುಲ,ತಲಾತಲ ಎಂಬ ಪ್ರದೇಶಗಳನ್ನು ಕಟ್ಟಿದ. ಬಲಿಗಾಗಿ ಆಶ್ಮನಗರವನ್ನು ನಿರ್ಮಿಸಿದ. ಇದರ ಅವಶೇಷಗಳು ಹಲವನ್ನು ಈಗಲು ನೋಡಬಹುದು.
೨. ಸರ್ಪಕುಲದ ಅಳಿಯ ಆಸ್ತಿಕ ಮಹರ್ಷಿಯಿಂದ #ಆಜ್ಟೆಕ್ ಜನಾಂಗ ಪ್ರಾರಂಬವಾಯಿತು.
೩. ನಾಗ ಜನಾಂಗೀಯರ #ಇಂಕ ಸಾಮ್ರಾಜ್ಯ , ಇವರ ವಂಶವನ್ನು ಈಗಲೂ ಉತ್ತರ ಮತ್ತು ದಕ್ಷಿಣ ಅಮೆರಿಕದ ಹಲವು ಕಡೆ ಕಾಣುತ್ತಾರೆ.
೪. ದಕ್ಷಿಣ ಅಮೆರಿಕದ ಹಲವು ರಾಷ್ಟ್ರಗಳಲ್ಲಿ ಮೂಲ ಜನಾಂಗ ಭಾರತೀಯ ಚಹರೆ,ಬಣ್ಣವನ್ನೆ ಹೋಲುವುದನ್ನು ಕಾಣಬಹುದು
೫. ಮಾಯಾನ್, ಆಜ್ಟೆಕ್, ಇಂಕಾ ಸಾಂಪ್ರದಾಯಿಕ ಹಲವು ಹೋಲಿಕೆ ಕಾಣಬಹುದು ಭಾರತೀಯರಂತೆ ಪೃಕೃತಿಯನ್ನು ಪೂಜಿಸುವರು, ಪುರೋಹಿತಶಾಹಿ, ಪಂಚಾಂಗ ಮುಂತಾದ ಹಲವು ಆಚರಣೆ ನಮ್ಮನ್ನೆ ಹೋಲುತ್ತದೆ.
ಪ್ರಪಂಚದಾದ್ಯಂತ ಭಾರತದಿಂದ ವಲಸೆ ಹೋಗಿ ಅನೇಕ ನಾಗರಿಕತೆಗಳ ಹುಟ್ಟು ಹಾಕಿದ ಇತಿಹಾಸವನ್ನು ನಾವು ಓದದಂತೆ ತಿರುಚಿ ಅರೆಬರೆ ಸಂಸ್ಕೃತ ಕಲಿತ ಮಾಕ್ಸಮಲ್ಲರ್ ನನ್ನು ಮಹಾನ್ ಪಂಡಿತನೆಂದು ತಿಳಿದು ಆಂಗ್ಲರಿಗೆ ಅನುಕೂಲವಾಗಿ ಇತಿಹಾಸ ಬರೆದಿದ್ದನ್ನೆ ಮಹಾನ್ ಇತಿಹಾಸ ಎಂದು ತಿಳಿದ ಮೂರ್ಖರು ನಾವು. ಇತ್ತಿಚೀಗೆ ಅನೇಕ ಸಂಶೋಧನೆಗಳಿಂದ ನೈಜ ಇತಿಹಾಸದ ಪುಸ್ತಕಗಳು ಬಂದಿದೆ .
ಭೂಮಿಯ ೧೮೫೧-೨೧೫೯ ಮಿಲಿಯನ್ ವರ್ಷಗಳ ಹಿಂದೆ ನಡೆದ ಈ ಐತಿಹಾಸಿಕ ಘಟನೆಗಳನ್ನು ಕಾಲಕ್ರಮೇಣ ಪುರಾಣದ ರೂಪದಲ್ಲಿ ಸ್ವಲ್ಪ ಮಟ್ಟಿಗೆ ಅತಿಶಯವಾಗಿ ಕಥೆಗಳ ರೂಪದಲ್ಲಿ ಬದಲಾಗಿ ಕೇಳುತ್ತೇವೆ. ಆದರೆ ಅದರ ಬಗ್ಗೆ ವೈಜ್ಞಾನಿಕ ಮತ್ತು ಸಂಶೋಧನೆಗಳಿಂದ ಅನ್ವೇಷಿಸಿದಾಗ ಅನೇಕ ಪುರಾಣದ ಕಥೆಗಳು ಇತಿಹಾಸವಾಗಿ ಕಂಡುಬರುತ್ತದೆ ಅದನ್ನು ಅರ್ಥೈಸಿಕೊಳ್ಳವ ಮನೋಭಾವ ಇರಬೇಕು .
ಮತ್ತೊಂದು ವಿಷಯ ಬಲಿ ಚಕ್ರವರ್ತಿ ಗೇ ಮಹಾವಿಷ್ಣು ಅನ್ಯಾಯ ಮಾಡಿದ ಎಂದು ಬೊಬ್ಬೆ ಹೊಡೆದುಕೊಳ್ಳವ ಜನರೇ ಬಲಿ ಚಕ್ರವರ್ತಿ ಬಲಶಾಲಿಯಾದಂತೆ ಬಲಿಯಲ್ಲೂ ಅನೇಕ ದುರ್ಗಣಗಳು ಹೆಚ್ಚಾಗಿ ಪಾಪ ಕಾರ್ಯಗಳಿಗೆ ಕೈ ಹಾಕಿದಾಗ ಬಲಿಯನ್ನು ಮಟ್ಟಹಾಕಲು ದೇವತೆಗಳ ಕೈಯಲ್ಲೂ ಸಾಧ್ಯವಾಗದಾಗ ಮಹಾವಿಷ್ಣು ವಾಮನ ಅವತಾರ ಎತ್ತಬೇಕಾಯಿತು.