05.17.2020 - By Kelirondu Katheya Team
" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . ಈ ವಾರದ ಕಾರ್ಯಕ್ರಮದಲ್ಲಿ "ಬೆಣ್ಣೆ ಕರಗಿತು " ಅನ್ನುವ ನಾಟಕ ನಡೆಸಿಕೊಡುತ್ತಾರೆ . ಇಂಪಾದ ಹಿನ್ನಲೆ ಸಂಗೀತ , ಹಾಸ್ಯಭರಿತ ಸಂಭಾಷಣೆ ಇರುವ ಈ ನಾಟಕ ಮಕ್ಕಳಿಗೆ ಇಷ್ಟವಾಗುವುದರಲ್ಲಿ ಸಂದೇಹವಿಲ್ಲ . ಕದ್ದು ತಂದ ಬೆಣ್ಣೆಯ ಸಲುವಾಗಿ ಜಗಳವಾಡುತ್ತಿದ್ದ ಎರಡು ಬೆಕ್ಕುಗಳಿಗೆ ಚಳ್ಳೆಹಣ್ಣು ತಿನಿಸುವ ಯೋಜನೆ ಮಾಡಿದ ಮಂಗಪ್ಪ ತಾನೇ ಪೇಚಿಗೆ ಸಿಕ್ಕಿದ ಈ ಕತೆ ಕೇಳೋಕೆ ಬಲು ಮೋಜು .