Uday Gaonkar

ಕನ್ನಡದೋಳ್ ಭಾವಿಸಿದ ಜನಪದಂ- ಹೊಸಪೇಟೆ ಕನ್ನಡ


Listen Later

ಕನ್ನಡದ ನುಡಿಯೆಂಬುದು ಪಡಿಯಚ್ಚಿನಲ್ಲಿ ಒಡಮೂಡಿದ ಏಕಶಿಲೆಯಂತಹ ಭಾಷೆಯಲ್ಲ. ಹಾಗೆ ನೋಡಿದರೆ, ಕನ್ನಡವೆಂಬುದು ಒಂದೇ ಒಂದು ಭಾಷೆಯೂ ಅಲ್ಲ. ಈ ಮಾತನ್ನು ಎಲ್ಲ ಭಾಷೆಗಳಿಗೂ ಅನ್ವಯಿಸಬಹುದು. ಹಲವು ಆಡುರೂಪುಗಳು, ಹತ್ತಾರು ಭಾಷೆಗಳಿಂದ ಎರವಲು ಪಡೆದ ಪದಗಳು, ಹಲವು ಬಗೆಯ ಧ್ವನಿ ಸಂಚಾರಗಳು, ಭಿನ್ನ ದೇಹಭಾಷೆಗಳು ಹೀಗೆ, ಕನ್ನಡಕ್ಕೆ ದಕ್ಕಿರುವ ಬಹು ಆಯಾಮಗಳ ಚೆಂದವನ್ನು ಕನ್ನಡ ಮಾಸ ನವೆಂಬರಿನಲ್ಲಿ *ಟೀಚರ್ ಪತ್ರಿಕೆ* ಸಂಭ್ರಮಿಸುತ್ತದೆ.
ಹಾವೇರಿಯವರಾದ ಸುಜಾತಾ ಗಿಡ್ಡಪ್ಪಗೌಡ್ರು ಕಲಿತದ್ದು ಧಾರವಾಡದಲ್ಲಿ. ಈಗಿರುವುದು ಹೊಸಪೇಟೆಯ ಕಮಲಾಪುರದಲ್ಲಿ. ಉತ್ತರ ಕರ್ನಾಟಕದ ಎಲ್ಲ ಕಡೆಗಳಲ್ಲೂ ಧಾರವಾಡ ಕನ್ನಡ ಮಾತಾನಾಡುತ್ತಾರೆಂಬ ತಪ್ಪುತಿಳುವಳಿಕೆ ಎಲ್ಲರಲ್ಲಿದೆ. ಬೀದರಿನ ಕನ್ನಡವೇ ಬೇರೆ ಹೊಸಪೇಟೆಯ ಕನ್ನಡವೇ ಬೇರೆ.
...more
View all episodesView all episodes
Download on the App Store

Uday GaonkarBy Uday Gaonkar